ನಿನ್ನೆ ತಾಯಿ, ಇಂದು ಮಗ:ಪಾಪ ಪ್ರಾಯಶ್ಚಿತಕ್ಕೆ ಪ್ರಾಣಬಿಟ್ಟನಾ ಮಗ? 

ಹೊಸದಿಗಂತ ವರದಿ ಮಂಡ್ಯ: 

ನಿನ್ನೆ ತಾಯಿ, ಇಂದು ಮಗ ಸಾವನ್ನಪ್ಪಿದ್ದಾರೆ. ಮಂಡ್ಯದ ಕ್ರಿಶ್ಚಿಯನ್ ಕಾಲೋನಿಯ ನಿವಾಸಿಗಳಾದ ಅಭಿನವ ಭಾರತಿ ಶಾಲೆಯ ನಿವೃತ್ತ ಶಿಕ್ಷಕಿ ವೀಣಾ ಮತ್ತು ಇವರ ಮಗ ನಿತಿನ್ ಮೃತರು.  ಕ್ರಿಶ್ಚಿಯನ್ ಕಾಲೋನಿಯ ಎರಡನೇ ಕ್ರಾಸ್ ನ ಮನೆಯಲ್ಲಿ ವೀಣಾ ರವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಹೊಸ ವರ್ಷದಂದು (ಭಾನುವಾರ) ಪತ್ತೆಯಾಗಿತ್ತು.

ಸೋಮವಾರ ಇವರ ಮಗ ನಿತಿನ್  ಮೃತದೇಹ ವಿಸಿ ಫಾರಂ ಗೇಟ್ ಬಳಿಯ ರೈಲ್ವೆ ಹಳಿಯ ಮೇಲೆ ಪತ್ತೆಯಾಗಿದ್ದು, ರೈಲಿಗೆ ತಲೆ ಕೊಟ್ಟು ಸಾವನಪ್ಪಿದ್ದಾನೆ.

ತಾಯಿ ಕೊಲೆಗೈದ ಪ್ರಾಯಶ್ಚಿತ್ತಕ್ಕೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿ ಕೊಂಡಿದ್ದಾನಾ, ಅಥವಾ ತಾಯಿಯ ಸಾವಿನಿಂದ ಮನನೊಂದಿದ್ದನಾ,
ತಾಯಿಯ ಸಂಶಯಾಸ್ಪದ ಸಾವು, ಮಗನ ಆತ್ಮಹತ್ಯೆ ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!