ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಯೋಗ ದಿನಾಚರಣೆ

ಹೊಸದಿಗಂತ ವರದಿ ಬೆಂಗಳೂರು:

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಸನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಜಿ ಮಂಜುನಾಥ್, ಗಾಂಧಿನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಸಪ್ತಗಿರಿ ಗೌಡ, ಪಕ್ಷದ ಪ್ರಮುಖರು ಮತ್ತು ಕಾರ್ಯಾಲಯದ ಸಿಬ್ಬಂದಿ ಭಾಗವಹಿಸಿದ್ದರು. ಹೂವಿನ ಕುಂಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಉದ್ಘಾಟನೆ ಮಾಡಲಾಯಿತು. ವಿವಿಧ ಯೋಗಾಸನ ಭಂಗಿಗಳನ್ನು ಅಭ್ಯಾಸ ಮಾಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!