ಹೊಸದಿಗಂತ ವರದಿ ವಿಜಯನಗರ:
ವಿಶ್ವವಿಖ್ಯಾತ ಹಂಪಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಗೆ ಆಗಮಿಸಿರುವ ಶೆರ್ಪಾಗಳು ಇಂದು ಬೆಳಿಗ್ಗೆ ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಹಂಪಿಗೆ ಭೇಟಿ ನೀಡಿದರು. ಈ ವೇಳೆ ಹಂಪಿಯಲ್ಲಿ ಸೂರ್ಯೋದಯ ಮುನ್ನ ತುಂಗಭದ್ರಾ ನದಿ ದಡದಲ್ಲಿರುವ ಶ್ರೀ ಪುರಂದರ ಮಂಟಪದಲ್ಲಿ ಯೋಗಾಭ್ಯಾಸ ನಡೆಸಿದರು.
ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆಗೆ ಆಗಮಿಸಿದ ಸದಸ್ಯ ಹಾಗೂ ಅತಿಥಿ ರಾಷ್ಟ್ರಗಳ ಅತ್ಯುನ್ನತ ಪ್ರತಿನಿಧಿಗಳು ಯೋಗಾಭ್ಯಾಸ ನಂತರ ಐತಿಹಾಸಿಕ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿ (ಕೊರಾಕಲ್ ರೈಡ್) ಮಾಡಿ ಸಂಭ್ರಮಿಸಿದರು.
ಹಂಪಿಯ ಚಕ್ರತೀರ್ಥದ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿಯನ್ನು ನಡೆಸಿ, ಹಂಪಿಯ ಕಲ್ಲುಬಂಡೆ, ನದಿಯ ಪ್ರಾಕೃತಿಕ ಸೌಂದರ್ಯವನ್ನು ಕಣ್ತುಂಬಿಕೊಂಡರು.