ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆ ಮತ್ತು ಮಥುರಾದಲ್ಲಿನ ದೇವಾಲಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ಧಾರೆ. ಜೊತೆಗೆ ಅಯೋಧ್ಯೆಯಲ್ಲಿನ ಮದ್ಯದಂಗಡಿ ಮಾಲೀಕರ ಪರವಾನಿಗೆಯನ್ನೂ ಕೂಡ ರದ್ದುಗೊಳಿಸಲಾಗಿದೆ.
ಈ ಆದೇಶವು ಇಂದಿನಿಂದಲೇ ಜಾರಿಗೆ ಬರುತ್ತಿದ್ದು ಮದ್ಯ, ಭಾಂಗ್ ಸೇರಿದಂತೆ 37 ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಅಯೋಧ್ಯೆ ರಾಮಮಂದಿರದ ಸುತ್ತ ಇರುವ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಿರುವ ಯೋಗಿ ಅವರಿಗೆ ಹಾಲು ಮಾರಾಟ ಮಾಡಬಹುದು ಎಂದು ಸಲಹೆ ನೀಡಿದ್ದಾರೆ. ಮಥುರಾದಲ್ಲೂ ಇದೇ ರೀತಿ ಮಾಡಿರುವ ಸರ್ಕಾರವು ಮಥುರಾದ ಹೆಸರಾಂತ ಹಾಲು ಉದ್ಯಮವನ್ನು ಪುನರುಜ್ಜೀವನಗೊಳಿಸಬಹುದು ಎಂದಿದೆ.
ಮಥುರಾದಲ್ಲಿ ಕಳೆದ ವರ್ಷವೇ ಮದ್ಯ ಮತ್ತು ಮಾಂಸ ಮಾರಾಟದ ಮೇಲೆ ನಿಷೇಧ ಹೇರಲಾಗಿತ್ತು. ನೂತನ ಆದೇಶದ ಅಡಿಯಲ್ಲಿ ಮಥುರಾದ ಹೊಟೆಲ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂರು ಬಾರ್ಗಳು ಹಾಗೂ ಎರಡು ಮದ್ಯದಂಗಡಿಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಆದೇಶ ನೀಡಲಾಗಿದೆ.