ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಿರುವ ಜ್ಞಾನವಾಪಿ ಮಸೀದಿಯಲ್ಲಿ ಹಿಂದುಗಳು ಪೂಜೆ ನಡೆಸಬಹುದು ಎಂದು ಈಗಾಗಲೇ ನ್ಯಾಯಾಲಯ ತಿಳಿಸಿದೆ. ಇನ್ನು ಇದರ ಬೆನ್ನಲೇ ಈಗಾಗಲೇ ಮಸೀದಿಯ ಆವರಣದಲ್ಲಿ ನಿತ್ಯ ಪೂಜಾ ಕೈಂಕರ್ಯಗಳು ನಡೆಯುತ್ತಿದೆ.
ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜ್ಞಾನವಾಪಿ ಮಸೀದಿಗೆ ಭೇಟಿ ನೀಡಿ ಮಸೀದಿಯ ಆವರಣದಲ್ಲಿ ವಿಶೇಷ ಪೂಜೆ, ಸೇವೆ ಸಲ್ಲಿಸಿದ್ದಾರೆ. ನ್ಯಾಯಾಲದಲ್ಲಿ ಇನ್ನು ಈ ಕುರಿತು ವಿಚಾರಣೆ ನಡೆಯುತ್ತಿರುವ ಬೆನ್ನಲೇ ಇದೀಗ ಯೋಗಿ ಆದಿತ್ಯನಾಥ್ ಅವರ ಭೇಟಿ ಸಂಚಲನವನ್ನು ಸೃಷ್ಟಿ ಮಾಡಿದೆ.
ಫೆ. 24 ಹಾಗೂ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಗೆ ಬರಲಿದ್ದಾರೆ ಎನ್ನಲಾಗಿದೆ. ಆದರೆ ಈಗ ಮೋದಿ ಅವರು ಬರುವ ಮುನ್ನವೇ ಯೋಗಿ ಅವರು ವಾರಾಣಸಿಗೆ ಭೇಟಿ ನೀಡಿರುವುದು ಹಲವು ಚರ್ಚೆಗಳಿಗೆ ದಾರಿ ಮಾಡಿಕೊಟ್ಟಿದೆ. ಅಷ್ಟೇ ಅಲ್ಲದೆ ಅಲ್ಲಿನ ಅಭಿವೃದ್ಧಿ ಕುರಿತು ಕೂಡ ಯೋಗಿ ಅವರು ಪರಿಶೀಲನೆ ನಡೆಸಿದ್ದಾರೆ.