ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿಯನ್ನು ಹಿಡಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ದೆಹಲಿ ಪ್ರವಾಸದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.
ಯುಪಿ ಚುನಾವಣೆಯಲ್ಲಿ ಜಯಗಳಿಸಿದ ಯೋಗಿ ಆದಿತ್ಯನಾಥ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದರು. ಈ ವೇಳೆ ಯೋಗಿ ಆದಿತ್ಯನಾಥ್ ಅವರು ತಮ್ಮ ಪ್ರಮಾಣವಚನ ಸಮಾರಂಭಕ್ಕೆ ಪ್ರಧಾನಿಗೆ ಆಹ್ವಾನವನ್ನೂ ನೀಡಿದರು ಎನ್ನಲಾಗಿದೆ.
ಪ್ರಧಾನಿ ಭೇಟಿಗೂ ಮುನ್ನ ಯೋಗಿ ಆದಿತ್ಯನಾಥ್ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದರು. ಈ ವೇಳೆ ಸಿಎಂ ಯೋಗಿ ಯುಪಿ ಚುನಾವಣೆ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಉಪರಾಷ್ಟ್ರಪತಿಗೆ ಮಾಹಿತಿ ನೀಡಿದರು. ಇದಕ್ಕೂ ಮೊದಲು ಯೋಗಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಮತ್ತು ಕೇಂದ್ರ ಸಚಿವ ಸರ್ಬಾನಂದ ಸೋನೆವಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.