ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅಭಿನಯದ ಸಾಮ್ರಾಟ್ ಪೃಥ್ವಿರಾಜ್ ಚಿತ್ರವು ಜೂ.3ರಂದು ಬೆಳ್ಳಿತೆರೆಯ ಮೇಲೆ ಬರಲಿದೆ. ಚಿತ್ರದ ಬಿಡುಗಡೆಗೂ ಮುನ್ನ ಲಕ್ನೋದಲ್ಲಿ ಚಿತ್ರದ ವಿಶೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಚಿತ್ರವನ್ನು ವೀಕ್ಷಿಸಿದ ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಿತ್ರವೀಕ್ಷಿಸಿದ್ದು ರಾಜ್ಯದಲ್ಲಿ ಚಿತ್ರವನ್ನು ತೆರಿಗೆ ಮುಕ್ತ ಗೊಳಿಸಿದ್ಧಾರೆ.
ಸಾಮ್ರಾಟ್ ಫೃಥ್ವಿರಾಜ್ ವೀಕ್ಷಿಸಿದ ಯೊಗಿ ಭಾರತದ ಶ್ರೀಮಂತ ಸಂಸ್ಕೃತಿಯನ್ನು ತೋರಿಸಿದ್ದಕ್ಕಾಗಿ ಚಿತ್ರತಂಡವನ್ನು ಅಭಿನಂದಿಸಿದ್ದಾರೆ ಅಲ್ಲದೇ ರಾಜ್ಯದಲ್ಲಿ ಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ನೀಡಿದ್ಧಾರೆ.
ಇಸ್ಲಾಂ ಆಕ್ರಮಣಕಾರ ಮೊಹಮದ್ ಘೋರಿಯ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ರಜಪೂತ ರಾಜ ಪೃಥ್ವಿರಾಜ್ ಚೌಹಾಣ್ ಅವರ ಜೀವನ್ನು ಆಧರಿಸಿದ ಚಿತ್ರ ಇದಾಗಿದ್ದು ಅಕ್ಷಯ್ ಕುಮಾರ್ ಸಾಮ್ರಾಟ ಪೃಥ್ವಿರಾಜನಾಗಿ ಮಿಂಚಿದ್ದರೆ ಮಾನುಷಿ ಛಿಲ್ಲರ್ ಅವರು ಪೃಥ್ವಿರಾಜ್ ಚೌಹಾಣ್ ನ ಪ್ರೀತಿಯ ಸಂಯೋಗಿತಾ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಸಂಜಯ್ ದತ್ ಮತ್ತು ಸೋನು ಸೂದ್ ಕೂಡ ನಟಿಸಿದ್ದಾರೆ. ಸಾಮ್ರಾಟ್ ಪೃಥ್ವಿರಾಜ್ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಜೂನ್ 3 ರಂದು ಬಿಡುಗಡೆಯಾಗಲಿದೆ.