ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಬುಂದೇಲ ಖಂಡದಲ್ಲಿ ನಿರ್ಮಾಣವಾಗುತ್ತಿರುವ ಜನರಲ್ ಬಿಪಿನ್ ರಾವತ್ ಡಿಫೆನ್ಸ್ ಕಾರಿಡಾರ್ ಅಭಿವೃದ್ಧಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 400 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ರಾಜ್ಯದ ಹಣಕಾಸು ಸಚಿವ ಗುರುವಾರ ರಾಜ್ಯ ವಿಧಾನಸಭೆಯಲ್ಲಿ 2022-2023 ರ ಬಜೆಟ್ ಅನ್ನು ಮಂಡಿಸಿದ ನಂತರ ಈ ಘೋಷಣೆಯನ್ನು ಮಾಡಲಾಗಿದೆ.
“ಬುಂದೇಲ್ಖಂಡ್ನಲ್ಲಿ ಜನರಲ್ ಬಿಪಿನ್ ರಾವತ್ ರಕ್ಷಣಾ ಮತ್ತು ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಗೆ ನಾವು 400 ಕೋಟಿ ರೂ.ಗಳನ್ನು ಪ್ರಸ್ತಾಪಿಸಿದ್ದೇವೆ. ಹಾಗೂ . ರಾಜ್ಯದ ಎಂಟು ವಿಭಾಗಗಳಲ್ಲಿ ಭ್ರಷ್ಟಾಚಾರ ವಿರೋಧಿ ಆರ್ಗನೈಸೇಷನ್ನ ಘಟಕಗಳನ್ನು ಸ್ಥಾಪಿಸಲು ಯೋಚಿಸಲಾಗುತ್ತಿದೆ. ರಾಜ್ಯದಲ್ಲಿ ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಯೋಜನೆಯನ್ನು ಉತ್ತೇಜಿಸಲು 200 ಕೋಟಿ ರೂ.ಗಳನ್ನು ಪ್ರಸ್ತಾಪಿಸಲಾಗಿದೆ. ಆಪ್ಟಿಕಲ್ ಫೈಬರ್ ಕೇಬಲ್ ನೆಟ್ವರ್ಕ್ನಲ್ಲಿನ ಯೋಜನೆಗಳಿಗೆ 300 ಕೋಟಿ ರೂ.ಗಳ ನಿಬಂಧನೆಯನ್ನು ಪ್ರಸ್ತಾಪಿಸಲಾಗಿದೆ” ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.