ಉತ್ತರ ಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಯೋಗಿ ಆಯ್ಕೆ: ನಾಳೆ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಉತ್ತರ ಪ್ರದೇಶದ ಲಕ್ನೋದಲ್ಲಿ ಗುರುವಾರ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಔಪಚಾರಿಕವಾಗಿ ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದು, ಉತ್ತರ ಪ್ರದೇಶದ ವೀಕ್ಷಕರಾಗಿ ನಾಮನಿರ್ದೇಶನಗೊಂಡಿದ್ದಾರೆ.
ಯೋಗಿ ಆದಿತ್ಯನಾಥ್ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರನ್ನು ಭೇಟಿಯಾಗಲಿದ್ದಾರೆ ಮತ್ತು ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ.
ಗೋಮತಿ ನಗರದ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರೀಡಾಂಗಣದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಉನ್ನತ ನಾಯಕರು, ಪ್ರಮುಖ ಕೈಗಾರಿಕೋದ್ಯಮಿಗಳು ಮತ್ತು ಮಠಾಧೀಶರು ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!