ಮನೆ ಮನೆಗೂ ತಲುಪಲಿದೆ ಯೋಗೀ ಕೀ ಪಾತೀ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ ಮನೆ ಮಾಡಿದ್ದು, ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ತ್ರಿವರ್ಣ ಧ್ವಜವನ್ನು ಪ್ರೊಫೈಲ್​-ಕವರ್​ ಫೋಟೋ ಆಗಿ ಹಾಕಿಕೊಂಡು ದೇಶಭಕ್ತಿ ವ್ಯಕ್ತಪಡಿಸಲಾರಂಭಿಸಿದ್ದಾರೆ.

ಇತ್ತ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರವು ವಿಭಿನ್ನ ರೀತಿಯಲ್ಲಿ ಆಚರಿಸುತ್ತಿದೆ.ಪ್ರತಿ ಮನೆಗೂ ಮುಖ್ಯಮಂತ್ರಿ ಹೆಸರಿನಲ್ಲಿ ಪತ್ರವೊಂದು ತಲುಪಲಿದೆ. ‘ಯೋಗೀ ಕೀ ಪಾತೀ’ ಎಂಬ ಶೀರ್ಷಿಕೆಯೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದೇಶ ಉತ್ತರಪ್ರದೇಶದ ಸುಮಾರು 3 ಕೋಟಿ ಮನೆಗಳಿಗೆ ತಲುಪಲಿದೆ.

ಆಗಸ್ಟ್​ 2ರಿಂದ 15ರ ವರೆಗೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಪ್ರೊಫೈಲ್ ಫೋಟೋಗಳಲ್ಲಿ ತ್ರಿವರ್ಣ ಧ್ವಜ ಹಾಕಿಕೊಳ್ಳಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಹಾಗೆಯೇ ಆ.13 ಮತ್ತು 15ರ ಅವಧಿಯಲ್ಲಿ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಲಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!