ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಮನವೀಯ ಮುಖ ಮತ್ತೊಮ್ಮೆ ಅನಾವರಣವಾಗಿದ್ದು, ತಮ್ಮ ಪ್ರಯಾಣದ ಸಂದರ್ಭ ದಾರಿಯಲ್ಲಿ ಬರುತ್ತಿದ್ದ ಆಂಬುಲೆನ್ಸ್ಗೆ ದಾರಿಮಾಡಿಕೊಡಲು ತಮ್ಮ ಬೆಂಗಾವಲು ಪಡೆಯನ್ನೇ ರಸ್ತೆ ಬದಿಗೆ ಸರಿಸಿ ನಿಲ್ಲಿಸಿದ ಘಟನೆ ರಾಜಭವನದ ಬಳಿ ನಡೆದಿದೆ.
ಯೋಗಿ ಹೊರಡುವ ಹಾದಿಯಲ್ಲಿ ಬೆಂಗಾವಲು ಪಡೆಯಿಂದಾಗಿ ಅಂಬುಲೆನ್ಸ್ ಸಂಚಾರಕ್ಕೆ ಅಡಚಣೆಯಾಗಿತ್ತು. ಇದನ್ನು ಗಮನಿಸಿದ ಅವರು ಬೆಂಗಾವಲು ಪಡೆಯನ್ನು ನಿಲ್ಲಿಸಿ ಅಂಬುಲೆನ್ಸ್ಗೆ ಮುಂದೆ ಸಾಗಲು ಅವಕಾಶ ಮಾಡಿಕೊಟ್ಟಿದ್ದಾರೆ.
ತುರ್ತು ಸ್ಥಿತಿಯಲ್ಲಿದ್ದ ಆಂಬುಲೆನ್ಸ್, ಮುಖ್ಯಮಂತ್ರಿಯವರ ಬೆಂಗಾವಲು ವಾಹನ ಇದ್ದ ಕಾರಣದಿಂದ ರಸ್ತೆಯಲ್ಲೇ ನಿಲ್ಲಿಸಬೇಕಾಗಿತ್ತು. ಇದನ್ನು ನೋಡಿದ ಯೋಗಿಯವರು ತಕ್ಷಣ ತಮ್ಮ ಭದ್ರತಾ ಸಿಬ್ಬಂದಿಯನ್ನು ರಸ್ತೆಬದಿಯಲ್ಲಿ ನಿಲ್ಲಿಸಲು ಮತ್ತು ಆಂಬ್ಯುಲೆನ್ಸ್ ಹೋಗಲು ಅವಕಾಶ ಮಾಡಿಕೊಡುವಂತೆ ಹೇಳಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬೆಂಗಾವಲು ಪಡೆ ಹಜರತ್ಗಂಜ್ನಿಂದ ಬಂದರಿಯಾಬಾಗ್ಗೆ ಹೋಗುತ್ತಿದ್ದಾಗ ರಾಜಭವನದ ಬಳಿ ಈ ಘಟನೆ ನಡೆದಿದೆ ಎಂದು ಟ್ರಾಫಿಕ್ ಡಿಸಿಪಿ ಸುಭಾಷ್ ಚಂದ್ರ ಶಾಕ್ಯ ಶುಕ್ರವಾರ ಹೇಳಿದ್ದಾರೆ.