ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತೆಲಂಗಾಣದಿಂದ ಸ್ಪರ್ಧಿಸಬೇಕು ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಒತ್ತಾಯಿಸಿದ್ದಾರೆ.
ಈ ಕುರಿತು ಸೋನಿಯಾ ಗಾಂಧಿ ಅವರ ಜೊತೆ ತಾವು ದೂರವಾಣಿ ಕರೆ ಮಾಡಿ ಮಾತನಾಡಿರುವುದಾಗಿ ಅವರು ಹೇಳಿದ್ದಾರೆ.
ತೆಲಂಗಾಣ ರಾಜ್ಯ ರಚನೆಗೆ ಕಾರಣಿಭೂತರಾಗಿರುವ ಸೋನಿಯಾ ಗಾಂಧಿ ಅವರನ್ನು ಇಲ್ಲಿನ ಜನ ತಾಯಿ ಎಂದು ಭಾವಿಸಿದ್ದಾರೆ. ಹಾಗಾಗಿ ಜನ ಲೋಕಸಭಾ ಗೆಲುವಿನ ಮೂಲಕ ಅವರ ಋಣ ತೀರಿಸಬೇಕಿದೆ ಎಂದು ಹೇಳಿದ್ದಾರೆ.
ಸೋನಿಯಾ ಅವರು ತೆಲಂಗಾಣದಿಂದ ಲೋಕಸಭೆಗೆ ಸ್ಪರ್ಧಿಸಬೇಕು ಎಂದು ತೆಲಂಗಾಣ ಕಾಂಗ್ರೆಸ್ ಗೊತ್ತುವಳಿ ಅಂಗೀಕರಿಸಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಪ್ರಕಟಿಸುವುದಾಗಿ ಸೋನಿಯಾ ಅವರು ತಿಳಿಸಿದ್ದಾರೆ ಎಂದು ರೇವಂತ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.