ಹೊಸದಿಗಂತ ಡಿಜಿಟಲ್ ಡೆಸ್ಕ್ :
ನೀವು ನನ್ನನ್ನು ಜೈಲಿಗೆ ಹಾಕಿ ತೊಂದರೆ ಕೊಡಬಹುದು, ಆದರೆ ನನ್ನ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಜೈಲಿನಿಂದ ಸಂದೇಶ ಕಳುಹಿಸಿದ್ದಾರೆ.
ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿ ಸಿಸೋಡಿಯಾ ಅವರನ್ನು ದೆಹಲಿಯ ವಿಶೇಷ ನ್ಯಾಯಾಲಯವು ಮಾರ್ಚ್ 17ರವರೆಗೆ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿದೆ.
ಈ ವೇಳೆ ನೀವು ನನ್ನನ್ನು ಜೈಲಿಗೆ ಹಾಕುವ ಮೂಲಕ ತೊಂದರೆ ಕೊಡಬಹುದು. ಆದರೆ ನನ್ನ ಆತ್ಮವಿಶ್ವಾಸವನ್ನು ಕುಗ್ಗಿಸಲು ಸಾಧ್ಯವಿಲ್ಲ. ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರಿಂದ ತೊಂದರೆಗೊಳಗಾದರು. ಆದರೆ ಅವರ ಉತ್ಸಾಹ ಕುಂದಲಿಲ್ಲ ಎಂದು ಜೈಲಿನಿಂದ ಮನೀಷ್ ಸಿಸೋಡಿಯಾ ಕಳುಹಿಸಿದ ಸಂದೇಶವನ್ನು ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.
साहेब जेल में डालकर मुझे कष्ट पहुँचा सकते हो,
मगर मेरे हौसले नहीं तोड़ सकते,
कष्ट अंग्रेजो ने भी स्वतंत्रता सेनानियों को दिए,
मगर उनके हौसले नहीं टूटे।
– जेल से मनीष सिसोदिया का संदेश
— Manish Sisodia (@msisodia) March 11, 2023