ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲರೂ ಬಂದು ಮತ ಚಲಾಯಿಸುವಂತೆ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಮನವಿ ಮಾಡಿದರು. ಬೆಂಗಳೂರಿನ ಜಯನಗರದಲ್ಲಿರುವ ಬಿಇಎಸ್ ಕಾಲೇಜಿನಲ್ಲಿ ಮತ ಚಲಾಯಿಸಿ ಮಾತನಾಡಿದ ಅವರು. ಜನರು ಗುಂಪು ಗುಂಪಾಗಿ ಬಂದು ಮತ ಹಾಕಬೇಕು. ವಿಶೇಷವಾಗಿ ಯುವಕ ಯುವತಿಯರು ಮತದಾನ ಮಾಡಬೇಕು ಎಂದರು.
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳು ಸೇರಿದಂತೆ ದೇಶಾದ್ಯಂತ ಇಂದು ಎರಡನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ 13 ರಾಜ್ಯಗಳ ಒಟ್ಟು 89 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಮತದಾನ ಆರಂಭವಾಗಿದೆ.