ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಗಳಿಗೆ ಥೈರಾಯ್ಡ್ ಸಮಸ್ಯೆ ಇರುವ ಕಾರಣ ಹೊರಗಿನ ಆಹಾರ ತಿನ್ನಬೇಡ ಎಂದು ತಂದೆ ಬೈದಿದ್ದಕ್ಕೆ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ಘಟನೆ ನಡೆದಿದ್ದು, ಬಿಬಿಎ ವ್ಯಾಸಂಗ ಮಾಡುತ್ತಿದ್ದ ಭೂಮಿಕಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅಡುಗೆ ಮನೆಗೆ ತೆರಳಿ ಉದ್ದನೆಯ ಬಟ್ಟೆ ಬಳಸಿ ನೇಣಿಗೆ ಶರಣಾಗಿದ್ದಾಳೆ.
ಪೋಷಕರು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಭೂಮಿಕಾ ಮೃತಪಟ್ಟಿದ್ದಾಳೆ.
ತಂದೆಯ ಬೈಗುಳದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ.