ಈಗಿನವರೇಕೆ ಇಷ್ಟು ಸೂಕ್ಷ್ಮ? ರಸ್ತೆ ಬದಿ ಆಹಾರ ತಿನ್ಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಗಳಿಗೆ ಥೈರಾಯ್ಡ್ ಸಮಸ್ಯೆ ಇರುವ ಕಾರಣ ಹೊರಗಿನ ಆಹಾರ ತಿನ್ನಬೇಡ ಎಂದು ತಂದೆ ಬೈದಿದ್ದಕ್ಕೆ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಘಟನೆ ನಡೆದಿದ್ದು, ಬಿಬಿಎ ವ್ಯಾಸಂಗ ಮಾಡುತ್ತಿದ್ದ ಭೂಮಿಕಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅಡುಗೆ ಮನೆಗೆ ತೆರಳಿ ಉದ್ದನೆಯ ಬಟ್ಟೆ ಬಳಸಿ ನೇಣಿಗೆ ಶರಣಾಗಿದ್ದಾಳೆ.

ಪೋಷಕರು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಭೂಮಿಕಾ ಮೃತಪಟ್ಟಿದ್ದಾಳೆ.

ತಂದೆಯ ಬೈಗುಳದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!