ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ (KR Circle Underpass) ಭಾರೀ ಮಳೆಗೆ ಕಾರು ಮುಳುಗಡೆಯಾಗಿ ಟೆಕ್ಕಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಹರೀಶ್ ಬಂಧಿಸಿದ ಕಾರು ಚಾಲಕ. ನೀರು ನಿಂತಿದ್ದರೂ ಬೇಜವಾಬ್ದಾರಿತನದಿಂದ ಅಂಡರ್ ಪಾಸ್ನಲ್ಲಿ ಕಾರು ಚಲಾಯಿಸಿ ಅವಘಡಕ್ಕೆ ಕಾರಣನಾಗಿರುವ ಆರೋಪದಡಿ ಹರೀಶ್ನನ್ನು ಬಂಧಿಸಲಾಗಿದೆ.
ಪ್ರಯಾಣಿಕರು ಬೇಡ ಎಂದು ಹೇಳಿದರೂ ಕೇಳದ ಚಾಲಕ ಹರೀಶ್, ನೀರು ತುಂಬಿದ್ದ ಅಂಡರ್ ಪಾಸ್ನಲ್ಲಿ ಕಾರು ಚಲಾಯಿಸಿದ್ದಾನೆ. ಈ ವೇಳೆ ಕಾರ್ ಬಂದ್ ಬಿದ್ದ ಹಿನ್ನೆಲೆ ಪ್ರಯಾಣಿಕರು ಕಾರಿನಿಂದ ಇಳಿಯಲು ಯತ್ನಿಸಿದಾಗ ಹರೀಶ್, ಬೇಡ ತಾನೇ ಕಾರ್ ಆನ್ ಮಾಡಿ ಕರೆದೊಯ್ಯುವುದಾಗಿ ಹೇಳಿದ್ದ ಎಂದು ಆರೋಪಿಸಲಾಗಿದೆ.
ಮತ್ತೊಂದೆಡೆ ಬಿಬಿಎಂಪಿ ಬೆಜವಾಬ್ದಾರಿಗೆ ಅಂಡರ್ ಪಾಸ್ನಲ್ಲಿ ಮಳೆ ನೀರು ತುಂಬಿದೆ ಎಂದು ಆರೋಪಿಸಲಾಗಿದೆ. ಭಾನುರೇಖಾ ಸಾವಿಗೆ ಚಾಲಕ ಹರೀಶ್, ಬಿಬಿಎಂಪಿ ಕಾರಣ ಎಂದು ಮೃತಳ ಸಹೋದರ ಬಿಬಿಎಂಪಿ ಹಾಗೂ ಕಾರ್ ಚಾಲಕನ ವಿರುದ್ಧ ದೂರು ನೀಡಿದ್ದರು. ಅದರಂತೆ ಕಾರು ಚಾಲಕನ್ನು ಬಂಧಿಸಲಾಗಿದೆ.