ಚಾರಣಕ್ಕೆ ಬಂದು ದಾರಿತಪ್ಪಿದ ಯುವತಿಯರು: ಪೊಲೀಸರಿಂದ ರಕ್ಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಿಂದ ರಾಮನಗರದ ಹಂದಿಗೊಂದಿ ಬೆಟ್ಟಕ್ಕೆ ಚಾರಣಕ್ಕೆ ಬಂದ ಆರು ಜನ ಯುವತಿಯರು ವಾಪಸ್ ಆಗುವಾಗ ದಾರಿ ತಪ್ಪಿ ಕಾಡಿನಲ್ಲಿ ಅಲೆದಾಡಿದ ಘಟನೆ ನಡೆದಿದೆ.

ಆರು ಜನ ಹುಡುಗಿಯರು. ಚಾರಣ ಮುಗಿಸಿ ವಾಪಸ್ ಹೋಗುವಾಗ ಕಾಡಿನ ಮಧ್ಯೆ ದಾರಿ ತಪ್ಪಿದ್ದಾರೆ. ಹೊರಹೋಗಲು ದಾರಿ ಸಿಗದೆ ಕಾಡಿನಲ್ಲಿ ಅಲೆದಾಡಿದ್ದಾರೆ. ಕೊನೆಗೆ 112ಗೆ ಕರೆ ಮಾಡಿ ದಾರಿ ತಪ್ಪಿದ ಬಗ್ಗೆ ಮಾಹಿತಿ ನೀಡಿರುವ ಹುಡುಗಿಯರನ್ನು ರಾಮನಗರ ಐನೂರು ಪೊಲೀಸರು ರಕ್ಷಿಸಿದ್ದಾರೆ ..

ಬಸವನಪುರ ಗ್ರಾಮದ ಸುಮಾರು ಹತ್ತಕ್ಕೂ ಹೆಚ್ಚು ಜನರನ್ನು ಬಳಸಿಕೊಂಡು ಪೊಲೀಸರು ಕಾರ್ಯಾಚರಣೆ ನಡೆಸಿ ರಾತ್ರಿ ಸುಮಾರು 9 ಗಂಟೆಗೆ ಪತ್ತೆ ಮಾಡಿದ್ದಾರೆ.

ಬಳಿಕ ದಾರಿ ತಪ್ಪಿದ್ದ ಹುಡುಗಿಯರ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದು ಬೆಂಗಳೂರಿಗೆ ಕಳುಹಿಸಿಕೊಟ್ಟರು .

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!