ದಿಗಂತ ವರದಿ ವಿಜಯಪುರ:
ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ಹಲ್ಲೆಗೈದಿರುವ ಘಟನೆ ನಗರದ ಕೋರ್ಟ್ ವೃತ್ತದ ಬಳಿ ಸೋಮವಾರ ರಾತ್ರಿ ನಡೆದಿದೆ.
ಹೂವಿನ ವ್ಯಾಪಾರಿ ಫಿರೋಜ್ ಮುಲ್ಲಾ (32) ಹಲ್ಲೆಗೊಳಗಾದ ಯುವಕ. ಫಿರೋಜ್ ಮುಲ್ಲಾ ಈತನ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.