ಪ್ರಧಾನಿ ಮೋದಿ ಕುರಿತು ಹಾಡು ಹಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಶಾಸಕ ಶ್ರೀವತ್ಸ ಖಂಡನೆ

ಹೊಸದಿಗಂತ ವರದಿ, ಮೈಸೂರು:

ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ ಹಾಡು ಹಾಡಿದ್ದಕ್ಕೆ ಯುವಕ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವುದನ್ನುಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ತೀವ್ರವಾಗಿ ಖಂಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ದಿನಗಳ ಹಿಂದೆ ಆ ಯುವಕ ರೋಹಿತ್ ನನ್ನನ್ನು ಭೇಟಿ ಮಾಡಿದ್ದ. ನಾನೇ ಆ ಗೀತೆಯನ್ನು ನೋಡಿ ಬಿಡುಗಡೆ ಮಾಡಿದ್ದೆ. ಹಾಡು ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಮೋದಿ ಮೂರನೇ ಬಾರಿ ಯಾಕೆ ಪಿಎಂ ಆಗಬೇಕು ಎಂಬುದನ್ನು ಬಹಳ ಸ್ಪಷ್ಟವಾಗಿ ತೋರಿಸಲಾಗಿದೆ. ಇಂದು ಆ ಯುವಕನ ಮೇಲೆ ಮೋದಿ ಹಾಡು ಹಾಡಿದ ವಿಚಾರಕ್ಕೆ ಹಲ್ಲೆ ಮಾಡಲಾಗಿದೆ ಅಂತ ಹೇಳಲಾಗಿದೆ. ಯುವಕನೇ ಹೇಳುವಂತೆ ಯುವಕರ ಗುಂಪು ಹಲ್ಲೆ ಮಾಡಿ ಮೂತ್ರ ವಿಸರ್ಜನೆ ಮಾಡಿದ್ದಾರಂತೆ. ಇದನ್ನು ನಾನು ಖಂಡಿಸುತ್ತೇನೆ. ಚುನಾವಣಾ ವೇಳೆಯಲ್ಲಿ ಇಂತಹ ಘಟನೆ ನಡೆಯಬಾರದು. ಈಗಾಗಲೇ ಡಿಸಿಪಿ ಜೊತೆ ಮಾತನಾಡಿದ್ದೇನೆ. ನಿಖರ ಮಾಹಿತಿ ತಿಳಿಯುತ್ತೆ. ನಂತರ ನಮ್ಮ ಹೋರಾಟ ರೂಪಿಸುತ್ತೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!