ಹೊಸದಿಗಂತ ಡಿಜಿಟಲ್ ಡೆಸ್ಕ್:
ದೌರ್ಜನ್ಯ, ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪ ಹಿನ್ನೆಲೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ (BV Srinivas) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಯನ್ನು ಬೆಂಗಳೂರಿನ ಸಿಸಿಹೆಚ್ 72ರ ಜಡ್ಜ್ ಕೆ.ಎಸ್.ಜ್ಯೋತಿಶ್ರೀ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.
ಇದರಿಂದ ಶ್ರೀನಿವಾಸ್ಗೆ ಬಂಧನ ಭೀತಿ ಶುರುವಾಗಿದೆ.
ಅಸ್ಸಾಂನ ಕಾಂಗ್ರೆಸ್ ನಾಯಕಿ ಅಂಕಿತಾ ದತ್ತಾ ದೂರು ನೀಡಿದ್ದರು. ಮ್ಯಾಜಿಸ್ಟ್ರೇಟ್ ಮುಂದೆ ಯುವತಿ 164ರಡಿ ಹೇಳಿಕೆ ದಾಖಲಿಸಿದ್ದಾರೆ ಎಂದು ಯುವತಿ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದಮಂಡಿಸಿದ್ದರು. ಅಸ್ಸಾಂ ಪೊಲೀಸರ ಪರ ಅಲ್ಲಿನ ಎಸ್ಪಿಪಿ ವಾದಿಸಿದ್ದರು. ಹಾಗಾಗಿ ಬಿ.ವಿ.ಶ್ರೀನಿವಾಸ್ಗೆ ನಿರೀಕ್ಷಣಾ ಜಾಮೀನನ್ನು ಕೋರ್ಟ್ ನಿರಾಕರಿಸಿದೆ.