February 24, 2026
Tuesday, February 24, 2026
spot_img

ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ: ದೇಶದ ಹಿತಕ್ಕಾಗಿ ಪ್ರೊಟೆಸ್ಟ್ ಸಹಜ ಎಂದ ಖರ್ಗೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದ ಯುವ ಕಾಂಗ್ರೆಸ್ ಕಾರ್ಯರ್ತರ ನಡೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಸಹಜ. ದೇಶದ ಹಿತಕ್ಕಾಗಿ ಇಂತಹ ಪ್ರೊಟೆಸ್ಟ್​​ಗಳು ಆಗುತ್ತವೆ ಎಂದು ಹೇಳಿದ್ದಾರೆ.

ಯೂತ್​ ಕಾಂಗ್ರೆಸ್​ ಮುಖಂಡರ ಬಂಧನವನ್ನು ಖಂಡಿಸಿ ಮಾತನಾಡಿದ ಅವರು, ಎಂದಿರುವ ಖರ್ಗೆ, ಕಾಮನ್ ವೆಲ್ತ್ ಗೇಮ್​​ ವೇಳೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿರಲಿಲ್ವಾ? ಯೂತ್​​ ಕಾಂಗ್ರೆಸ್​​ನವರು ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರೊಟೆಸ್ಟ್​​ ನಡೆಸಿದ್ದಾರೆ ಎಂದರು.

ಅಮೆರಿಕ ಅಧ್ಯಕ್ಷ ಟ್ರಂಪ್​ ಹೇಳಿದ್ದನ್ನು ಪ್ರಧಾನಿ ಮೋದಿ ಕೇಳುತ್ತಿದ್ದು, ಅವರು ಸರೆಂಡರ್ ಆಗಿದ್ದಾರೆ ಅಂತಲೂ ಗಂಭೀರ ಆರೋಪ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !