September 18, 2026
Friday, September 18, 2026
spot_img

ಮನೆಯ ಮುಂದೆ ಮಲಗಿದ್ದ ಯುವಕನ ಕತ್ತು ಕೊಯ್ದು ಹ*ತ್ಯೆ

ಹೊಸದಿಗಂತ ವರದಿ ವಿಜಯಪುರ:

ರಾತ್ರಿ ವೇಳೆ ಯುವಕನ ಕತ್ತು ಕೊಯ್ದು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಜಾಲವಾದ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಇಸಾಕ್ ಬಾಗವಾನ (25) ಹತ್ಯೆಯಾದ ಯುವಕ.

ಇಸಾಕ್ ಬಾಗವಾನ ಈತ ಮನೆಯ ಮುಂದಿನ ಕಟ್ಟೆಯ ಮೇಲೆ ಮಲಗಿದ್ದ ವೇಳೆ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ಹತ್ಯೆಗೆ ಕಾರಣ ಹಾಗೂ ಆರೋಪಿಗಳ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !