ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುವಕರು ಏನಾದರೂ ಮೋದಿ ಮೋದಿ ಅಂದರೆ ಅವರ ಕಪಾಳಕ್ಕೆ ಬಾರಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಕರೆ ನೀಡಿದ್ದು, ಇದೀಗ ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ (Congress) ಅಭ್ಯರ್ಥಿ ರಾಜಶೇಖರ್ ಹಿಟ್ನಾಳ (Rajashekar Hitnal) ಪರ ಮತಯಾಚನೆ ಸಭೆಯಲ್ಲಿ ಮಾತನಾಡಿದ ಶಿವರಾಜ್ ತಂಗಡಗಿ,
ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಯುವಕರು ಏನಾದರೂ ಮೋದಿ ಮೋದಿ ಅಂದರೆ ಅವರ ಕಪಾಳಕ್ಕೆ ಬಾರಿಸಬೇಕು ಎಂದು ಕರೆ ನೀಡಿದ್ದಾರೆ.
ಮೋದಿಯವರು ಕೇವಲ ಸುಳ್ಳು ಹೇಳುತ್ತಿದ್ದಾರೆ. ಇದುವರೆಗೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಯುವ ಜನರು ಉದ್ಯೋಗ ಕೇಳಿದರೆ ಪಕೋಡಾ ಮಾರಲು ಹೋಗಿ ಎನ್ನುತ್ತಾರೆ. ಈಗ ಮತ್ತೆ ಚುನಾವಣೆ ಬಂತು ಅಂತ ಬರುತ್ತಾರೆ. ಯುವಕರು ಮೋದಿ ಮೋದಿ ಅಂದರೆ ಅವರ ಕಪಾಳಕ್ಕೆ ಬಡಿಯಬೇಕು ಎಂದು ಹೇಳಿದ್ದಾರೆ.