ಸೋಶಿಯಲ್ ಮೀಡಿಯಾದಿಂದ ನೇರ ಪೊಲೀಸ್ ಠಾಣೆಯ ಮೆಟ್ಟಿಲು ಹತ್ತಿಸಿತು ಯುವಕರ ‘ಪಿಸ್ತೂಲ್’ ಶೋಕಿ!

ಹೊಸದಿಗಂತ ಕಲಬುರಗಿ:

ಸಾಮಾಜಿಕ ಜಾಲತಾಣದಲ್ಲಿ ಮಿಂಚಲು ಮಾಡಿದ ಫೋಟೋ ಶೂಟ್ ಇಬ್ಬರು ಯುವಕನ್ನು ಠಾಣೆಯ ಮೆಟ್ಟಿಲೇರಿಸಿದೆ!

ಸೇಡಂ ಪಟ್ಟಣದ ಇಂದಿರಾನಗರದ ನಿವಾಸಿಗಳಾದ ಮಹೇಶ ಹಾಗೂ ಬಸವರಾಜ ಎಂಬಿಬ್ಬರು ಲೈಟರ್ ಮಾದರಿಯ ನಕಲಿ ಪಿಸ್ತೂಲ್ ಹಿಡಿದ ಪೋಟೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಹರಿಯಬಿಟ್ಟಿದ್ದರು. ಇದು ವೈರಲ್ ಆಗುತ್ತಿದ್ದಂತೆಯೇ ಅಲರ್ಟ್ ಆದ ಸೇಡಂ ಪೊಲೀಸರು ಸಮಾಜದಲ್ಲಿ ಅಶಾಂತಿಯ ವಾತವರಣ ಸೃಷ್ಠಿಸಿದ ಆರೋಪದಲ್ಲಿ ಇವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಲಾಗಿದ್ದು, ನಕಲಿ ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಭಾವಚಿತ್ರಗಳನ್ನು ಹರಿಬಿಡುವ ಮೂಲಕ ಅಶಾಂತಿ ಸೃಷ್ಠಿಸದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!