ಮತಗಟ್ಟೆಯಲ್ಲೇ ಮತದಾರನ ಕೆನ್ನೆಗೆ ಬಾರಿಸಿದ ವೈಎಸ್‍ಆರ್ ಶಾಸಕ, ಕಾರಣ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜನರು ಬಿಸಿಲಿನಲ್ಲಿ ಗಂಟೆಗಟ್ಟಲೆ ಕಾದು ತಮ್ಮ ಹಕ್ಕು ಚಲಾಯಿಸಲು ನಿಲ್ಲುತ್ತಾರೆ. ಆದರೆ ಏಕಾಏಕಿ ಬಂದ ಶಾಸಕರು ಎಲ್ಲ ಕ್ಯೂ ಬ್ರೇಕ್‌ ಮಾಡಿ ಹೋಗಿ ಮತ ಹಾಕುತ್ತಾರೆ!

ಕ್ಯೂನಲ್ಲಿ ಬಂದು ಮತ ಹಾಕಲು ಹೇಳಿದ್ದಕ್ಕೆ ವೈಎಸ್‍ಆರ್ ಕಾಂಗ್ರೆಸ್‍ನ ಶಾಸಕ ಅನ್ನಾಬತ್ತುನಿ ಶಿವಕುಮಾರ್  ಮತದಾರರೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಆಂಧ್ರ ಪ್ರದೇಶದ ತೆನಾಲಿ ಮತಗಟ್ಟೆಯಲ್ಲಿ ನಡೆದಿದೆ.

ಈ ವೇಳೆ ಮತದಾರ ಸಹ ಶಾಸಕರ ಕೆನ್ನೆಗೆ ಭಾರಿಸಿದ್ದಾರೆ. ಇದರಿಂದ ಶಾಸಕರ ಬೆಂಬಲಿಗರು ಮತದಾರನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲಿಸರು ಮತದಾರನನ್ನು ರಕ್ಷಿಸಿದ್ದಾರೆ. ತೆನಾಲಿಯ ಶಾಸಕ, ಸದ್ಯ ಅಭ್ಯರ್ಥಿಯಾಗಿ ಅನ್ನಾಬತ್ತುನಿ ಶಿವಕುಮಾರ್ ಸ್ಪರ್ಧೆ ಮಾಡಿದ್ದಾರೆ. ಇಂದು ಮತದಾನ ಮಾಡಲು ಮತಗಟ್ಟೆಗೆ ಆಗಮಿಸಿದ್ದಾಗ ಈ ಘಟನೆ ನಡೆದಿದೆ.

 

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!