ಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ವೈಎಸ್‍ಟಿ ಟ್ಯಾಕ್ಸ್ ಶುರು: ಕುಮಾರಸ್ವಾಮಿ ಬಾಂಬ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಮತ್ತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಸರಕಾರ ವೈಎಸ್‍ಟಿ ಟ್ಯಾಕ್ಸ್ (YST Tax) ಶುರು ಮಾಡಿದೆ ಎಂದು ಆರೋಪಿಸಿದ್ದಾರೆ.

ಕಳೆದ ವಾರ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಬಾಂಬ್ ಸಿಡಿಸಿದ್ದ ಅವರು,ಮತ್ತೆ ವರ್ಗಾವಣೆ ಆರೋಪವನ್ನು ಮುಂದುವರೆಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಹೊಸ ಟ್ಯಾಕ್ಸ್ ಜಾರಿಯಾಗಿದೆ. ದೇಶದಲ್ಲಿ ಜಿಎಸ್‍ಟಿ ಟ್ಯಾಕ್ಸ್ ಇರುವ ಹಾಗೆ ಈ ಸರ್ಕಾರದಲ್ಲಿ ವೈಎಸ್‍ಟಿ ಟ್ಯಾಕ್ಸ್ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ನಾನು ಸಿಎಂ ಆಗಿದ್ದಾಗ 5 ರೂ. ಕೂಡ ತೆಗೆದುಕೊಳ್ಳದೆ ವರ್ಗಾವಣೆ ಮಾಡಿದ್ದೇನೆ. ನನಗೆ ನೈತಿಕತೆ ಇದೆ. ನಾನು ಭಯ ಬೀಳುವ ಅಗತ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧವೂ ಕಿಡಿಕಾರಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!