ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕಾಂಗ್ರೆಸ್ ಯಿಂದ ಟಿಕೆಟ್ ಸಿಗದೆ ನಿರಾಶರಾಗಿದ್ದ ವೈಎಸ್ವಿ ದತ್ತಾ (YSV Datta) ಮತ್ತೆ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ, ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನಾಗಿಯೂ ಅವರನ್ನು ಘೋಷಣೆ ಮಾಡಲಾಗಿದೆ.
ಈ ಕುರಿತು ಪಕ್ಷದ ನಾಯಕ ಹೆಚ್ಡಿ ರೇವಣ್ಣ ಗುರುವಾರ ಸಂಜೆ ಘೋಷಣೆ ಮಾಡಿದರು. ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ದತ್ತಾ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ನಾಮಪತ್ರ ಸಲ್ಲಿಸುವ ದಿನ ದೇವೇಗೌಡರು ಆಗಮಿಸಲಿದ್ದಾರೆ. ಈ ಬಗ್ಗೆ ದೇವೇಗೌಡರೇ ಹೇಳಿದ್ದಾರೆ. ಅವರ ಮಾತಿಗೆ ಎಲ್ಲರೂ ಬೆಲೆ ಕೊಡಬೇಕು ಎಂದು ರೇವಣ್ಣ ಹೇಳಿದ್ದಾರೆ.
ಪಕ್ಷೇತರವಾಗಿ ಸ್ಪರ್ಧಿಸುವುದು ಬೇಡ ಎಂದು ದೇವೇಗೌಡರು ನನಗೆ ಹೇಳಿದ್ದಾರೆ. ಹಾಗಾಗಿ ಅವರ ಮಾತಿಗೆ ಬೆಲೆ ಕೊಡುತ್ತೇನೆ ಎಂದು ದತ್ತಾ ಹೇಳಿದ್ದಾರೆ. ಕಾರ್ಯಕರ್ತರ ಅಭಿಪ್ರಾಯವನ್ನೂ ಪಡೆದಿದ್ದೇನೆ. ಎಲ್ಲರ ಸಮ್ಮತಿಯೊಂದಿಗೆ ಜೆಡಿಎಸ್ ಸೇರಿದ್ದು, 18ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ದತ್ತಾ ಹೇಳಿದ್ದಾರೆ.