ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂದೂರ ಕಾರ್ಯಚರಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.
ಇದರ ಬೆನ್ನಲ್ಲೇ ಇದೀಗ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್ & ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಂದೇಶ ರವಾನಿಸಿದ್ದಾರೆ. ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ನಾಳೆ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ ಜಮೀರ್ ಅಹ್ಮದ್ ಅವರು ವಕ್ಫ್ ಬೋರ್ಡ್ ಸಿಇಒಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.